ಕುಂದಾದ್ರಿ (Kundadri)

ಕುಂದಾದ್ರಿ ಬೆಟ್ಟವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿದೆ. ತೀರ್ಥಹಳ್ಳಿಯಿಂದ ಆಗುಂಬೆಗೆ ಹೋಗುವ ಮಾರ್ಗದಲ್ಲಿ ಗುಡ್ಡೆಕೇರಿ ಎಂಬ ಗ್ರಾಮದಿಂದ ಸುಮಾರು ೯ ಕಿ.ಮೀ ದೂರದಲ್ಲಿ ಕುಂದಾದ್ರಿ ಬೆಟ್ಟವಿದೆ. ಕುಂದಾದ್ರಿ ಬೆಟ್ಟವು ಜೈನರ ಪವಿತ್ರ ಯಾತ್ರಾ ಸ್ಥಳವಾಗಿದೆ. ಈ ಬೆಟ್ಟದ ಮೇಲೆ ಜೈನ ಬಸದಿ ಇದೆ. ಅಲ್ಲಿ ಶ್ರೀ ಪಾರ್ಶ್ವನಾಥರ ಮೂರ್ತಿ ಇದೆ . ಬೆಟ್ಟದ ಮೇಲಿನಿಂದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಹಬ್ಬವಾಗುತ್ತದೆ. ದೂರದಲ್ಲೋ ಕಾಣುವ ಮೋಡ ಈ ಕುಂದಾದ್ರಿಯ ಮೇಲೆ ನಿಂತರೆ ನಿಮ್ಮ ಮಧ್ಯೆ, ನಿಮ್ಮನ್ನು ಸೀಳಿಕೊಂಡೇ ಹೋಗುತ್ತದೆ. ಅದೊಂದು ಹೊಸ ಅನುಭವ ಕೊಡುವ ಸ್ಥಳ. ಇಲ್ಲೇ ಸಣ್ಣ ಪುಷ್ಕರಣಿ ಇದ್ದು, ಅಲ್ಲಿ ವರ್ಷದ 365 ದಿನವೂ ನೀರು ಇರುವುದು ವಿಶೇಷ. ಇನ್ನೊಂದು ಪುಟ್ಟದಾದ ತಾವರೆಕೆರೆ. ಸೂರ್ಯೋದಯ ಮತ್ತು ಸೂರ್ಯಾಸ್ತ ಇಲ್ಲಿನ ಮತ್ತೊಂದು ವಿಶೇಷ.

















No comments:

Post a Comment